Friday

ಚೇತನಾ ಬರೆದಾಗ

ಕನ್ನಡಪ್ರಭದಲ್ಲಿ ತಸ್ಲೀಮಾ ನಸ್ರೀನ್ ಅವರ ಅನುವಾದಿತ ಲೇಖನವೊಂದು ಪ್ರಕಟಗೊಂಡಿದ್ದು, ಆನಂತರ ರಾಜ್ಯದ ವಿವಿಧ ಭಾಗಗಳಲ್ಲಿ ಗಲಭೆ ನಡೆದಿದ್ದು, ಗಲಭೆಯಲ್ಲಿ ಇಬ್ಬರು ಬಲಿಯಾಗಿದ್ದು, ಮೂಲ ಲೇಖನವನ್ನು ತಿರುಚಲಾಗಿದೆ ಎಂದು ಸ್ವತಃ ತಸ್ಲೀಮಾ ನಸ್ರೀನ್ ಸ್ಪಷ್ಟನೆ ನೀಡಿದ್ದು ನಿಮಗೆ ನೆನಪಿರಬಹುದು. ಕನ್ನಡಪ್ರಭ ಸಾಪ್ತಾಹಿಕದಲ್ಲಿ ಸಿಂಧು ಎಂಬ ಹೆಸರಿನಲ್ಲಿ ಪ್ರಕಟಗೊಂಡ ಈ ಲೇಖನವನ್ನು ಬರೆದಿದ್ದು ಚೇತನಾ ತೀರ್ಥಹಳ್ಳಿಯವರು ಎಂಬ ವದಂತಿಯನ್ನು ಹಬ್ಬಿಸಲಾಗಿತ್ತು. ಇದರಿಂದಾಗಿ ಚೇತನಾ ಸಾಕಷ್ಟು ನೊಂದಿದ್ದರು. ಈಗ ಲೇಖನ ಬರೆದದ್ದು ಯಾರು ಎಂಬುದು ಬಹಿರಂಗವಾಗಿದೆ. ಆ ದಿನಗಳಲ್ಲಿ ತಾವು ಅನುಭವಿಸಿದ ನೋವನ್ನು ಚೇತನಾ ಇದೀಗ ತಮ್ಮ ಬ್ಲಾಗ್‌ನಲ್ಲಿ ಬರೆದಿದ್ದಾರೆ. ಅವರ ಅನುಮತಿ ಪಡೆದು ಈ ಬರಹವನ್ನು ಸಂಪಾದಕೀಯದಲ್ಲಿ ಪ್ರಕಟಿಸಬೇಕು ಎನ್ನುವಷ್ಟರಲ್ಲಿ ಅವರೇ ಈ ಲೇಖನವನ್ನು ಪ್ರಕಟಣೆಗಾಗಿ ಮೇಲ್ ಮಾಡಿದ್ದಾರೆ. ಚೇತನಾ ಅವರ ಈ ಲೇಖನ ಅವರ ವಿರುದ್ಧ ಪಿತೂರಿ ನಡೆಸಿದವರ ಕಣ್ತೆರೆಸಲಿ ಎಂಬುದು ನಮ್ಮ ಆಶಯ. ಚೇತನಾ ಅವರಿಗೆ ನಮ್ಮ ನೈತಿಕ ಬೆಂಬಲವಿರುತ್ತದೆ

No comments: