Tuesday

ರಂಗಾಯಣ -ಟೀವಿ ೫


ಹೌದು ರಂಗಾಯಣ ಎಲ್ಲೀವರೆಗೆ ಬಂತು ಎಂದು ಓದುಗರು ಕೇಳಿದ್ದಾರೆ. ಪ್ರಪಂಚವೇ ಹಾಗೆ. ಚಲಾವಣೆಯಲ್ಲಿದ್ದರೆ ಮಾತ್ರ ನೆನಪು, ಇಲ್ಲಾಂದ್ರೆ ಮರೆತೇ ಹೋಗುತ್ತೆ, ಇದು ಮನಸ್ಸಿನ ಹುಟ್ಟುಗುಣ. ಹಾಗೇನೇ ಕಿರು ತೆರೆ ಪರದೆಯಿಂದ ರಂಗ ಮರೆಯಾದ ಬಗ್ಗೆ ಮರೆತೇ ಹೋಗಿತ್ತು. ವಿಷಯ ಏನಪ್ಪಾ ಅಂದ್ರೆ ಮತ್ತೆ ಆಂಧ್ರ ಟೀವಿ ೫ ಹಿಡಿದುಕೊಂಡು ಕರ್ನಾಟಕಕ್ಕೆ ದಾಂಗುಡಿ ಇಡುತ್ತಿದ್ದಾರೆ ನಮ್ಮ ರಂಗನಾಥರು. ಟೀವಿ ೫ ಹೆಸರು ಮಾತ್ರ ಖರೀದಿ ಮಾಡಿದ್ದಾರೆ. ಉಳಿದೆಲ್ಲ ಸಂಪನ್ಮೂಲ ರಂಗಣ್ಣನೇ ವಹಿಸ್ಕೋಬೇಕು. ಈಗ ಹಣ ಹೇಗೆ ಹೊಂದಿಸೋದು ಎಂಬ ಬಗ್ಗೆ ಮಾತ್ರ ಚಿಂತೆ. ಹಿಂದೆ ಮಾಡಿಟ್ಟ ಹಣ ಸ್ವಲ್ಪ ಇದೆ, ಸುವರ್ಣ ಚಾನೆಲ್ ಶೇರ್ ಹಣ. ದೊಡ್ಡದಾಗಿ ರಂಗಕ್ಕೆ ಇಳಿಯಲು ಹಣ ಇಷ್ಟು ಸಾಲದು. ವಂತಿಗೆ ಎತ್ತಿ ಅಭ್ಯಾಸ ಇದ್ದರೂ ಅಷ್ಟೂ ಸಂಗ್ರಹವಾಗುವುದು ಡೌಟ್. ರಾಜಕೀಯ ನಾಯಕರ ಸಹವಾಸ ಕಷ್ಟ. ಧನಿಕರ ಬಳಿ ಹೋಗಬಹುದು ಆದರೆ ಕೊನೆಗೆ ಕನಿಕರ ತೋರದೆ ಕಿತ್ತು ಹಾಕುತ್ತಾರೆ. ಹೀಗಾಗಿ ಸಹಾಯ ಧನ ಸಂಗ್ರಹ ಚಿಂತೆಯಿಂದ ಸ್ವಲ್ಪ ವಿಳಂಬ ಆಗುತ್ತಿದೆ. ಆದರೂ ಶೀಘ್ರದಲ್ಲಿಯೇ ಹೊಸ ಕನ್ನಡ ಚಾನೆಲ್ ಮೂಲಕ ರಂಗಾಯಣ, ರಾಮಾಯಣ ಕದನ ನೋಡಬಹುದು.
ಸುವರ್ಣ ಪ್ರಭೆ
ಇಷ್ಟರಲ್ಲಿಯೇ ಸುವರ್ಣ-ಕೆಪಿ ಒಟ್ಟಾಗಿ ಬೆಂಗಳೂರಿನ ಎಂಜಿ ರೋಡ್ ನಲ್ಲಿ ಭವ್ಯ ಕಟ್ಟೋಣದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಒಳ್ಳೆ ಕ್ಯಾಫ್ಟನ್ ನಿರೀಕ್ಷೆಯಲ್ಲಿದ್ದಾರೆ ರಾಜೀವ್ ಚಂದ್ರ ಶೇಖರ್. ವಿ ಭಟ್ಟರು ಸಮರ್ಥರು ಆದರೆ ಅವರಿನ್ನೂ ವಿಕೆ ಹ್ಯಾಂಗ್ ಓವರ್ ನಿಂದ ಹೊರ ಬಂದಿಲ್ಲ ಅಂಥಾ ಕಾಣುತ್ತೆ. ಇದಕ್ಕೆ ಕೆಪಿಯ ಭಾನುವಾರದ ಅಂಕಣವೇ ಸಾಕ್ಷಿ. (ಆದರೆ ಅದರಲ್ಲಿಯೂ ಓದುಗರಿಗೆ ಕಚಗುಳಿ ಇಡುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನುವುದು ವಿಶೇಷ). ಹಳೆಯ ಶಿಲಾಯುಗದ ನೆನಪು ಮಾಸಿದ ಬಳಿಕ ಹೊಸ ಪ್ರಭೆಯಿಂದ ಸುವರ್ಣ ಯುಗಕ್ಕೆ ಚಾಲನೆ ಸಿಗಬಹುದು. ಅಲ್ಲೀವರೆಗೆ ಏನ್ ಮಾಡ್ತಾರೆ ಅನ್ನೋದನ್ನು ನಾವೂ ನೋಡ್ತಾ ಇರ್ತೀವಿ.

No comments: